ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ﷺ ರವರ ಪವಿತ್ರ ಮೀಲಾದುನ್ನಬಿ ಪ್ರಯುಕ್ತ ಸರ್ಕಾರವು ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರಂದು ನಿಗದಿಪಡಿಸಿದೆ.
ಆದರೆ, ಚಂದ್ರದರ್ಶನದಲ್ಲಿ ಉಂಟಾದ ವ್ಯತ್ಯಾಸದ ಹಿನ್ನೆಲೆಯಲ್ಲಿ ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿಯನ್ನು ಆಚರಿಸಬೇಕೆಂದು ಜಿಲ್ಲೆಯ ಖಾಝಿಗಳು ನಿರ್ಧರಿಸಿರುತ್ತಾರೆ.
ಆದ್ದರಿಂದ, ಆಗಸ್ಟ್ 26ರಂದು ನಿಗದಿಪಡಿಸಿರುವ ಸಾರ್ವತ್ರಿಕ ರಜೆಯನ್ನು ಆಗಸ್ಟ್ 25, ಮಂಗಳವಾರದಂದು ಮೀಲಾದುನ್ನಬಿ ಪ್ರಯುಕ್ತ ರಜೆಯಾಗಿ ಬದಲಾಯಿಸಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾ ಅಸಿಸ್ಟಾಂಟ್ ಅಧಿಕಾರಿ ಮಾನ್ಯ ಆಬಿದ್ ಸರ್ ರವರಿಗೆ ಸುನ್ನೀ ಕೋ-ಓರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಅದೇ ರೀತಿ, ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ರಿಝ್ವಾನ್ ಅರ್ಷದ್ ರವರಿಗೆ ಈ ಕುರಿತು ಇ-ಮೇಲ್ ಮೂಲಕವೂ ಮನವಿ ಸಲ್ಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಯಿತು.
ಸುನ್ನೀ ಕೋ-ಓರ್ಡಿನೇಷನ್ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಕೆ. ಎ. ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ರವರ ನೇತೃತ್ವದಲ್ಲಿ ನಡೆದ ನಿಯೋಗದಲ್ಲಿ ಅಡ್ವೊಕೇಟ್ ಹಬೀಬ್ ಅಲಿ ಅಂಬಾಗಿಲು, ಸುಭಾನ್ ಅಹ್ಮದ್ ಹೊನ್ನಾಳ,ವಸೀಮ್ ಬಾಷಾ ಕುಂದಾಪುರ, ಶೇಖ್ ನಹೀಮ್ ಕಟಪಾಡಿ ಹಾಗೂ ಅಶ್ರಫ್ ತೋನ್ಸೆ ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions