ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಧ್ಯಕ್ಷರಾದ ಅಬ್ಬುಲ್ ಜಬ್ಬಾರ್ ರವರು ಆಗಸ್ಟ್ 23ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.
ಈ ಹಿನ್ನಲೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರವರ ಸಮ್ಮಖದಲ್ಲಿ ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕಾರ್ಯಕರ್ತರ ಸಭೆಯ ರೂಪರೇಖೆಗಳ ಬಗ್ಗೆ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ರಾಜ್ಯ ಘಟಕದ ಕಾರ್ಯದರ್ಶಿಗಳಾದ ಡಾ. ಶೇಖ್ ವಹೀದ್, ಇಸ್ಮಾಯಿಲ್ ಆತ್ರಾಡಿ, ಹಸನ್ ಮನಿಪುರ, ಸದಾನಂದ ಕಾಂಚನ್, ನಕ್ವಾ ಯಹ್ಯ, ಮುಖಂಡರುಗಳಾದ ಡಾ. ಫಾರೂಕ್ ಚಂದ್ರನಗರ, ಫೀರೂ ಸಾಹೇಬ್, ತಾಜುದ್ದೀನ್, ಹಮೀದ್ ಯೂಸುಫ್, ಜಯವೀರ್, ರೋಶನ್ ರೋಡ್ರಗೀಸ್, ಲೆವಿನಾ, ಪ್ರೀತಿ, ರಯ್ಯಾನ್, ತಬ್ರೆಜ್, ಮುಜಾಹಿದ್ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಮತ್ತು ಪಕ್ಷದ ಅನೇಕ ನಾಯಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions