ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ,ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದ ರಾವ್ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರಾದ ಸುಪ್ರೀತ್ ಶೆಟ್ಟಿ ಕೆದಿಂಜೆ ಅವರ ಶಿಫಾರಸಿನ ಮೇರೆಗೆ ಅನಿಲ್ ಎಸ್ ಪೂಜಾರಿ ಮಾಳ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದ್ದಾರೆ.
ಮಾಳ-ಕೆರ್ವಾಶೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾಗಿ ಪ್ರಸಕ್ತ ನಿರ್ದೇಶಕರಾಗಿ,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ರಿ) ಇದರ ನಿರ್ದೇಶಕರಾಗಿ ಕಾರ್ಕಳ ಬಿಲ್ಲವ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮಾಳ ಗ್ರಾಮ ಪಂಚಾಯತ್ ನ ಸದಸ್ಯರಾಗಿ 3 ಬಾರಿ ಆಯ್ಕೆಯಾಗಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions