Advertisement

ಬೆಂಗಳೂರು : ನಮ್ಮ ಮತ - ನಮ್ಮ ಹಕ್ಕು - ನಮ್ಮ ಹೋರಾಟ " ಬೃಹತ್ ಪ್ರತಿಭಟನಾ ಸಭೆ

ರಾಜ್ಯದ ರಾಜಧಾನಿಯ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ. ರಾಹುಲ್ ಗಾಂಧಿ ಯವರ ನೇತೃತ್ವದಲ್ಲಿ ಇಂದು ನಡೆದ " ನಮ್ಮ ಮತ - ನಮ್ಮ ಹಕ್ಕು - ನಮ್ಮ ಹೋರಾಟ " ಬೃಹತ್ ಪ್ರತಿಭಟನೆಯಲ್ಲಿ ಉಡುಪಿ ಜಿಲ್ಲಾ ಹಾಗೂ ಕಾಪು ಕ್ಷೇತ್ರದ ಕಾಂಗ್ರೆಸ್ ಪಕ್ಷದ ನೂರಾರು ಮುಖಂಡರು ಭಾಗವಹಿಸಿದರು.

ಈ ಸಭೆಯಲ್ಲಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿಯವರು ದೇಶದ ಚುನಾವನಾ ಆಯೋಗ ಮತ್ತು ಬಿಜೆಪಿ ಪಕ್ಷದ ವಿರುದ್ದ ಕಳೆದ ಲೋಕಸಭೆಯ ಚುನಾವನೆಯಲ್ಲಿ ಮತಗಳಲ್ಲಿ ನಡೆದ ಅಕ್ರಮಗಳನ್ನು ಸಾಕ್ಷಿ ಸಮೇತ ಬಯಲಿಗೆಳೆದರು.

ಈ ಕಾರ್ಯಕ್ರಮದಲ್ಲಿ ಏಐಸಿಸಿಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು, ಏಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೊಪಾಲ್,ರಣದೀಪ್ ಸಿಂಗ್ ಸುರ್ಜಿವಾಲ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಕೆಪಿಸಿಸಿ ಪ್ರತಾರ ಸಮಿತಿಯ ರಾಜ್ಯದ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ, ಮತ್ತು ರಾಜ್ಯದ ಸಚಿವರು, ಕಾಂಗ್ರೆಸ್ ಪಕ್ಷದ ನಾಯಕರುಗಳು, ಶಾಸಕರುಗಳು, ಮತ್ತು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions