ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ರಿಶ್ಚಿಯನ್ ಭಾಂಧವರ ಪವಿತ್ರ ಹಬ್ಬವಾದ ಕ್ರಿಸ್ಮಸ್ ಹಬ್ಬವನ್ನು ಇಂದು ರಾಜೀವ್ ಭವನದಲ್ಲಿ ಆತ್ಮೀಯವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಮಂತ್ರಿಗಳೂ, ವಿಶ್ವದ ಖ್ಯಾತ ಆರ್ಥಿಕ ತಜ್ಞರೂ ಆಗಿದ್ದ ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಪುಣ್ಯತಿಥಿಯ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆ ಅವರು ಕ್ರಿಶ್ಚಿಯನ್ ಭಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ನಂತರ ಮಾತನಾಡಿದ ಅವರು, ದಿವಂಗತ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಗಳಾಗಿದ್ದ ಅವಧಿಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿಗೆ ನೀಡಿದ ಅಪಾರ ಕೊಡುಗೆ, ಅವರ ಸರಳ ಜೀವನ ಶೈಲಿ ಹಾಗೂ ನಿಷ್ಠಾವಂತ ಆಡಳಿತವನ್ನು ಸ್ಮರಿಸಿ ಕೊಂಡಾಡಿದರು.
ಈ ಕಾರ್ಯಕ್ರಮದಲ್ಲಿ ಎಂ.ಎ. ಗಪೂರ್, ಶರ್ಫುದ್ದೀನ್ ಶೇಖ್, ವೈ. ಸುಕುಮಾರ್, ಅರವಿಂದ್, ದಿವಾಕರ್ ಶೆಟ್ಟಿ, ಶಾಂತಲತಾ ಶೆಟ್ಟಿ, ಪ್ರಶಾಂತ್ ಜತ್ತನ್ನ, ಹಸನಬ್ಬ ಶೇಖ್, ರಮೀಜ್ ಹುಸೈನ್, ಹಮೀದ್ ಯೂಸುಫ್, ತಸ್ನೀನ್, ರಿಯಾಜ್, ಅಮೀರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಕ್ರಿಶ್ಚಿಯನ್ ಸಮುದಾಯದ ಸದಸ್ಯರು ಉಪಸ್ಥಿತರಿದ್ದರು.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions