Advertisement

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು- ಗೃಹ ಸಚಿವ ಪರಮೇಶ್ವರ

ತುಮಕೂರು: ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುತ್ತಿರುವ ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತರಾಗಿರುವ ಪೌರ ಕಾರ್ಮಿಕ ಸಿ ಎನ್ ಚಿನ್ನಯ್ಯ ಕುಟುಂಬಕ್ಕೆ ಅಗತ್ಯವಿದ್ದರೆ ಅಧಿಕಾರಿಗಳು ರಕ್ಷಣೆ ನೀಡುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಹೇಳಿದ್ದಾರೆ.

ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ಅಗತ್ಯವಿದ್ದರೆ ಪೊಲೀಸರು ಚಿನ್ನಯ್ಯ ಕುಟುಂಬದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಚಿನ್ನಯ್ಯ ಅವರ ಪತ್ನಿ ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ತಮಗೆ ರಕ್ಷಣೆ ಬೇಕು ಎಂದು ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ಅಂತಹದ್ದೇನಾದರೂ ಕಂಡುಬಂದರೆ, ಧರ್ಮಸ್ಥಳದಲ್ಲಿ ದೊಡ್ಡ ತನಿಖೆ ನಡೆಯುತ್ತಿರುವುದರಿಂದ ನಾವು ಅವರಿಗೆ ಸೂಕ್ತ ರಕ್ಷಣೆ ನೀಡುತ್ತೇವೆ ಎಂದರು.

ಸತ್ಯವನ್ನು ಹೊರತರುವಲ್ಲಿ ಯಾರಾದರೂ ಸಮಸ್ಯೆಯಾದರೆ, ನಾವು ಅವರನ್ನು ಖಂಡಿತವಾಗಿಯೂ ರಕ್ಷಿಸುತ್ತೇವೆ ಎಂದು ಅವರು ಹೇಳಿದರು.

ಸತ್ಯವನ್ನು ಹೊರತರುವಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಬೆದರಿಕೆ ಅಥವಾ ಕಿರುಕುಳಕ್ಕೆ ಒಳಗಾಗದಂತೆ ನೋಡಿಕೊಳ್ಳಲು ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಬದ್ಧವಾಗಿವೆ ಎಂದು ಪರಮೇಶ್ವರ ಒತ್ತಿ ಹೇಳಿದರು.

ಧರ್ಮಸ್ಥಳದಲ್ಲಿ ನೂರಾರು ಯುವತಿಯರು ಮತ್ತು ವಿದ್ಯಾರ್ಥಿನಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ಹೇಳಿದ್ದರು ಮತ್ತು ಈ ಬಗ್ಗೆ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ(ಎಸ್‌ಐಟಿ) ಕನಿಷ್ಠ 16 ಸ್ಥಳಗಳನ್ನು ಅಗೆದು ಎರಡು ಸ್ಥಳಗಳಲ್ಲಿ ಕೇವಲ ಎರಡು ಅಸ್ಥಿಪಂಜರಗಳ ಅವಶೇಷಗಳನ್ನು ಪತ್ತೆ ಮಾಡಿದೆ. ಬಳಿಕ ಸುಳ್ಳು ಸಾಕ್ಷ್ಯ ನೀಡಿದ ಆರೋಪದ ಮೇಲೆ ಚಿನ್ನಯ್ಯ ಅವರನ್ನು ಬಂಧಿಸಲಾಗಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions