ಮೈಸೂರಿನ ಮುಡಾ ಅಧ್ಯಕ್ಷ ಸ್ಥಾನ ಸೇರಿ 35-37 ಮಂದಿ ಕಾಂಗ್ರೆಸ್ ನಾಯಕರಿಗೆ ದಸರಾ ಉಡುಗೊರೆಯಾಗಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ಪ್ರಕಟವಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ನಾಯಕ ಎಂ.ಎಲ್.ಮೂರ್ತಿಗೆ ಮೈಸೂರಿನ ಮುಡಾ ಅಧ್ಯಕ್ಷ ಸ್ನಾನ ದೊರೆಯುವ ನಿರೀಕ್ಷೆ ಇದೆ ಎನ್ನಲಾಗಿದೆ. ಇದಲ್ಲದೆ, ಮಾಜಿ ಶಾಸಕ ಎನ್.ಸಂಪಂಗಿ, ಆಸ್ಕರ್ ಫರ್ನಾಂಡಿಸ್ ಆಪ್ತ ಗಫೂರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಘಾ ಸುಲ್ತಾನ್, ಸೇವಾದಳದ ಮಾಜಿ ಅಧ್ಯಕ್ಷೆ ಪ್ಯಾರೇಜಾನ್ ಸೇರಿ 35 ರಿಂದ 37 ಮಂದಿಗೆ ನಿಗಮ-ಮಂಡಳಿ ಭಾಗ್ಯ ಒಲಿಯುವ ಸಾಧ್ಯತೆಯಿದೆ.
ಈ ಕುರಿತ ಪಟ್ಟಿ ಈಗಾಗಲೇ ಹೈಕಮಾಂಡ್ ಬಳಿ ಸೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸುದೀರ್ಘ ಚರ್ಚೆ ನಡೆಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಹಿಂದೆಯೇ ಪಟ್ಟಿ ಸಲ್ಲಿಸಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions