ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ಸಾರಥ್ಯದಲ್ಲಿ ಸೆ.30 ರಂದು ಕಾಪು ಪಿಲಿಪರ್ಬ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ. ಕಾಪುವಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ರಕ್ಷಣಾ ಪುರ ಜನವೆರ್ ತಂಡದ ಅಧ್ಯಕ್ಷ ನವೀನ್ ಎನ್.ಶೆಟ್ಟಿ ತಿಳಿಸಿದ್ದಾರೆ.
ಸ್ಪರ್ಧೆಯಲ್ಲಿ 10 ತಂಡಗಳು ಹುಲಿವೇಷಧಾರಿಗಳ ತಂಡ ಭಾಗವಹಿಸಲಿದ್ದು, ವಿಜೇತ ತಂಡಗಳಿಗೆ ಪ್ರಥಮ ರೂ. 1.50 ಲಕ್ಷ, ದ್ವಿತೀಯ ರೂ. ಒಂದು ಲಕ್ಷ, ತೃತೀಯ ರೂ. 50 ಸಾವಿರ ಸಹಿತ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಅಲ್ಲದೆ ವಿಶೇಷ ಕರಿಹುಲಿ, ಅಕ್ಕಿಮುಡಿ ಹಾರಿಸುವುದು, ಅತ್ಯುತ್ತಮ ಹುಲಿ ಕುಣಿತಗಾರ ವಿಶೇಷ ಮರಿಹುಲಿ, ಅತ್ಯುತ್ತಮ ತಾಸೆ ವಿಶೇಷ ನಗದು ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions