ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಭಾರತ ಬೃಹತ್ ಸಮಾವೇಶ ಇಂದು ಕಾಪು ತಾಲೂಕಿನ ಶಿರ್ವದಲ್ಲಿ ನಡೆಯಿತು. ಕಾಪುವಿನ ಶಿರ್ವ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ಇವತ್ತು ಮಾಜಿ ಸಚಿವರು ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ನಡೆಯಿತು
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಶ್ರೀ ವಿನಯ್ ಕುಮಾರ್ ಸೊರಕೆಯವರು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರುಗಳಾದ ಶ್ರೀ ಕಿಮ್ಮನೆ ರತ್ನಾಕರ ಹೆಗ್ಡೆ, ಜೆ ಆರ್ ಲೋಬೋ, ಅಬ್ದುಲ್ ಮುನೀರ್ ಜನ್ಸಾಲೆ, ಗಾಂಧಿಜಿ ಯವರ ಅಹಿಂಸಾ ತತ್ವ ಮತ್ತು ಅಂಬೇಟ್ಕರ್ ರವರು ರಚಿಸಿದ ಸಂವಿಧಾನದ ಬಗ್ಗೆ ಸಭೆಯಲ್ಲಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾದ್ಯಕ್ಷರಾದ ಎಂ ಎ ಗಫೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ ಸುಕುಮಾರ್,ನವೀವ್ ಚಂದ್ರಸುವರ್ಣ, ಶರ್ಫುದ್ದೀನ್ ಶೇಖ್, ದಿವಾಕರ್ ಶೆಟ್ಟಿ, ವೀನ್ ಚಂದ್ರ ಶೆಟ್ಟಿ, ಮೆಲ್ವಿನ್ ಡಿಸೋಜ, ವಿಲ್ಸನ್ ರೋಡ್ರಗೀಸ್, ಡಾ. ಫಾರೂಕ್ ಚಂದ್ರನಗರ, ರಿಯಾಜ್ ಮುದರಂಗಡಿ, ಸೌರಬ್ ಬಲ್ಲಾಲ್, ಅಮೀರ್ ಮೊಹಮ್ಮದ್, ಹಸನಬ್ಬ ಶೇಖ್ ಇನ್ನಿತರ ಅನೇಕ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions