Advertisement

ಕಾಪು | ಶಿರ್ವ ಕಟಪಾಡಿ ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಲು ನಿರ್ಲಕ್ಷ್ಯ !

ಕಾಪು | ಶಿರ್ವ ಯೂತ್ ಕಾಂಗ್ರೆಸ್ ವತಿಯಿಂದ ಇಂದು ಶಿರ್ವ ಕಟಪಾಡಿ ರಸ್ತೆಯಲ್ಲಿ ಶಿರ್ವ ಭಾಗದ ಸಂಪೂರ್ಣವಾಗಿ ಹಾಳಾಗಿ ಹದಗೆಟ್ಟ ರಸ್ತೆ ದುರಸ್ತಿ ಮಾಡದ ಹಿನ್ನಲೆಯಲ್ಲಿ ಕಾಪು ಶಾಸಕರ ವಿರುದ್ದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಕಾಪು ಬ್ಲಾಕ್ ಅಧ್ಯಕ್ಷರಾದ ವೈ ಸುಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಗ್ರಾಮ ಪಂಚಾಯತ್ ಉಪಾದಕ್ಷರಾದ ವಿಲ್ಸನ್ ರೋಡ್ರಗೀಸ್, ರಮೇಶ್ ಡಿಸೋಜ, ಮೆಲ್ವಿಲ್ ಡಿಸೋಜ, ರಮಿಜ್ ಹುಸೇನ್, ಮೆಲ್ವಿನ್ ಡಿಸೋಜ ಸಭೆಯನ್ನು ಉದ್ದೇಶಿಸಿ ಮಾತನಾಡಿ ಶಾಸಕರ ಮತ್ತು ಅಧಿಕಾರಿಗಳ ನಿರ್ಲಕ್ಷದ ವಿರುದ್ದ ಕಿಡಿಕಾರಿದರು. ಲೋಕೋಪಯೋಗಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ತಕ್ಷಣ ರಸ್ತೆಯ ದುರಸ್ಥಿ ಕೆಲಸ ಪ್ರಾರಂಭ ಮಾಡಬೇಕೆಂದು ಮನವಿ ಕೊಡುವುದರ ಜೊತೆಗೆ ಆಗ್ರಹ ಮಾಡಲಾಯಿತು.

ಪ್ರತಿಭಟನಾ ಸಭೆಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೈ ಸುಕುಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶ್ರೀ ಶರ್ಪುದ್ದೀನ್ ಶೇಕ್, ಶ್ರೀ ಹಸನಬ್ಬ ಶೇಕ್, ರತನ್ ಶೆಟ್ಟಿ, ರಮೇಶ್ ಬಂಗೇರ, ವಿಲ್ಸನ್ ರೊಡ್ರಿಗಸ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾ ವಾಗ್ಗೆ, ಶ್ರೀಮತಿ ಗ್ರೇಸಿ ಕಾರ್ಡೊಜಾ, ಗ್ಲಾಡಿಸ್ ಅಲ್ವೇಡಾ, ಜುಬೇರ್ ಅಲಿ, ಹಸನ್ ಇಬ್ರಾಹಿಂ, ಜೈನುದ್ದೀನ್, ಆಶಾ ಅಂಚನ್, ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೀರ್ತನ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮೊಹಮದ್ ನಿಯಾಜ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಿರೀಶ್ ಕೋಟ್ಯಾನ್, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಅಬ್ದುಲ್ ಲತೀಫ್, ಕಾಪು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಅಬ್ದುಲ್ ಅಹಾದ್, ಅರುಣ್ ಪೂಜಾರಿ, ಅಜಯ್ ಪೂಜಾರಿ ಹಾಜರಿದ್ದರು. ಶಿರ್ವ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮೆಲ್ವಿನ್ ಡಿಸೋಜ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions