Advertisement

ಕುಂದಾಪುರ| ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಲಾರಿ ಢಿಕ್ಕಿ: ವಿದ್ಯಾರ್ಥಿಗಳು ಸಹಿತ 15 ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನವು ಎದುರುಗಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಬಲಭಾಗಕ್ಕೆ ತೀವ್ರ ಹಾನಿಯಾಗಿದೆ.

ಅಪಘಾತದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 7 ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ಕುಂದಾಪುರದ ಸರಕಾರಿ ಆಸ್ಪತ್ರೆ ಹಾಗೂ ಆದರ್ಶ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಟಿಪ್ಪರ್ ಚಾಲಕ ರಾಘವೇಂದ್ರ ಎಂಬುವವರು ಕೂಡ ಗಾಯಗೊಂಡಿದ್ದು, ಅವರನ್ನು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions