Advertisement

ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆ ಶಾಖೆಯ ಅಧ್ಯಕ್ಷ ಸಿರಾಜ್ ಮಲ್ಪೆ ನಿಧನ

ಮಲ್ಪೆ: ಜಮಾಅತೆ ಇಸ್ಲಾಮಿ ಹಿಂದ್ ಮಲ್ಪೆ ಶಾಖೆಯ ಅಧ್ಯಕ್ಷರಾದ ಸಿರಾಜ್ ಮಲ್ಪೆ ಅವರು ಇಂದು ಹೃದಯಾಘಾತದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಸಕ್ರಿಯ ಸಮಾಜ ಸೇವಕರಾಗಿದ್ದ ಸಿರಾಜ್ ಮಲ್ಪೆ ಅವರು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯ ಮಲ್ಪೆ ಶಾಖೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಸಮುದಾಯ ಕಲ್ಯಾಣ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಅವರು, ಲೇಖಕರಾಗಿಯೂ ಗುರುತಿಸಿಕೊಂಡಿದ್ದರು. ಅವರು ಅನುಗ್ರಹ ಟ್ರಸ್ಟ್‌ನ ಸದಸ್ಯರಾಗಿದ್ದರು. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ ಸೂಚನೆ : ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಅಧ್ಯಕ್ಷರಾದ ಡಾ. ಅಬ್ದುಲ್ ಅಝೀಜ್ ಅವರು ಸಿರಾಜ್ ಮಲ್ಪೆಯ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನಪರ ನಿಲುವುಗಳನ್ನು ಹೊಂದಿದ್ದ ಅವರು ಜಮಾಅತ್‌ನ ಸಕ್ರಿಯ ಕಾರ್ಯಕರ್ತರಾಗಿದ್ದು, ಉತ್ತಮ ನಾಯಕತ್ವ ಗುಣಗಳನ್ನು ಹೊಂದಿದ್ದರು ಎಂದು ಅವರು ಹೇಳಿದರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದರು. ಮೃತರ ಪತ್ನಿ, ಮಕ್ಕಳು ಹಾಗೂ ಕುಟುಂಬ ವರ್ಗಕ್ಕೆ ಈ ದುಃಖವನ್ನು ಸಹಿಸುವ ಶಕ್ತಿ ಕರುಣಿಸಲೆಂದು ಅವರು ಪ್ರಾರ್ಥಿಸಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions