ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ವಿವೇಕ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗೋಳಿಯಂಗಡಿ–ಮಧುವನ–ವಡ್ಡರ್ಸೆ–ಕೋಟ–ಕುಂದಾಪುರ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆಗೆ ಮಂಜೂರಾತಿ ದೊರೆತಿದೆ. ಈ ಮೂಲಕ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಹತ್ವದ ನೆರವು ಲಭಿಸಿದೆ.
ರಾಜ್ಯದ ಸಾರಿಗೆ ಹಾಗೂ ಮುಜುರಾಯಿ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಚೈತ್ರಾ ವಿ. ಗೌಡ ಅವರೊಂದಿಗೆ ಬೆಂಗಳೂರಿನಲ್ಲಿರುವ ಸಚಿವರ ನಿವಾಸದಲ್ಲಿ ಭೇಟಿ ಮಾಡಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಅವರು, ಬಸ್ ಸೇವೆ ಮಂಜೂರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಡ್ಡರ್ಸೆಯಲ್ಲಿರುವ ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವಂತೆ ಮನವಿ ಮಾಡಲಾಗಿದ್ದು, ಸಚಿವರು ತಕ್ಷಣ ಸ್ಪಂದಿಸಿ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿದ್ದಾರೆ.
ಇದಕ್ಕೂ ಮುನ್ನ, ಕಾವಡಿ–ಸೈಬರ್ಕಟ್ಟೆ–ಕಾರ್ಕಡ ಮಾರ್ಗದಲ್ಲಿಯೂ ಹೊಸ ಬಸ್ ಸೇವೆ ಕಲ್ಪಿಸುವಂತೆ ಅರ್ಜಿ ಸಲ್ಲಿಸಲಾಗಿದ್ದು, ಈ ಬೇಡಿಕೆಯಿಗೂ ಸರ್ಕಾರ ಶೀಘ್ರದಲ್ಲೇ ಸ್ಪಂದನೆ ನೀಡಲಿದೆ ಎಂಬ ವಿಶ್ವಾಸವನ್ನು ಅಜಿತ್ ಶೆಟ್ಟಿ ವ್ಯಕ್ತಪಡಿಸಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions