Advertisement

ಬ್ರಹ್ಮಗಿರಿ ಪರಿಸರದಲ್ಲಿ ಕಸದ ರಾಶಿ : ಕ್ರಮಕ್ಕೆ ಎಂ.ಇಕ್ಬಾಲ್ ಮನ್ನಾ ಆಗ್ರಹ

ಉಡುಪಿ : ನಗರದ ಬ್ರಹ್ಮಗಿರಿ ಮುಖ್ಯ ರಸ್ತೆಯಲ್ಲಿರುವ ಸಾಯಿ ರಾಧಾ ಪ್ರೈಡ್ ವಸತಿ ಸಮುಚ್ಚಯದ ಸಮೀಪದ ರಸ್ತೆ ಬದಿ ಕಸದ ರಾಶಿ ಕಂಡುಬಂದಿದ್ದು, ಇದರಿಂದ ಪರಿಸರದ ಜನರಲ್ಲಿ ರೋಗ ಹರಡುವ ಆತಂಕ ಎದುರಾಗಿದೆ.

ಸಮಯಕ್ಕೆ ಸರಿಯಾಗಿ ಇಲ್ಲಿನ ಕಸವನ್ನು ತೆರವುಗೊಳಿಸದ ಪರಿಣಾಮ ಸ್ಥಳದಲ್ಲಿ ತ್ಯಾಜ್ಯಗಳ ರಾಶಿಯೇ ಸೃಷ್ಠಿಯಾಗಿದೆ. ಇದರಿಂದ ಈ ಪರಿಸರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸುತ್ತಮುತ್ತಲಿನ ಅನೇಕ ವಸತಿ ಸಮುಚ್ಚಯಗಳ ನಿವಾಸಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ಹಿರಿಯ ನಾಗರಿಕರು, ಶಾಲಾ ಮಕ್ಕಳು, ಮಸೀದಿ, ಅಂಗಡಿಗಳು ಹಾಗೂ ಉಪಹಾರ ಗೃಹಗಳು ಇರುವುದರಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಂಚರಿಸುತ್ತಾರೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ಕಸದ ರಾಶಿಯನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡುವಂತೆ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಮನವಿ ಮಾಡಿದ್ದಾರೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions