ಕುಂದಾಪುರ ಹಂಚಿನ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರು ಉದ್ಯೋಗ ಭದ್ರತೆಯ ಬಗ್ಗೆ ಆತಂಕದಲ್ಲಿದ್ದು, ಹಂಚಿನ ಉತ್ಪಾದನೆಗೆ ಅಗತ್ಯವಿರುವ ಆವೆ ಮಣ್ಣು ಲಭ್ಯವಿಲ್ಲದ ಕಾರಣ ಕಾರ್ಖಾನೆಗಳು ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಂಚಿಗೆ ತಲುಪಿದ್ದಾರೆ.
ಈ ಗಂಭೀರ ಸಮಸ್ಯೆಯನ್ನು ಗಮನಿಸಿದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಅವರು ಕಾರ್ಮಿಕರ ಪರ ಧ್ವನಿ ಎತ್ತಿ, ಅವರ ನೆಮ್ಮದಿಗಾಗಿ ಕ್ರಮಕೈಗೊಳ್ಳುವಂತೆ ಮುಂದಾದರು. ಈ ಸಂಬಂಧ ಅವರು ಬೆಂಗಳೂರಿನಲ್ಲಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ, ಹಂಚಿನ ಉದ್ಯಮ ಎದುರಿಸುತ್ತಿರುವ ಸಂಕಷ್ಟ ಹಾಗೂ ಕಾರ್ಮಿಕರ ಭವಿಷ್ಯದ ಬಗ್ಗೆ ವಿವರಿಸಿದರು.
ಅಜಿತ್ ಶೆಟ್ಟಿ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಹಂಚಿನ ಉದ್ಯಮ ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಶೀಘ್ರದಲ್ಲೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಿದೆ ಎಂಬ ಭರವಸೆ ಸಚಿವರು ನೀಡಿದ್ದಾರೆ.
ಸರ್ಕಾರದ ಸ್ಪಂದನೆಯಿಂದ ಕಾರ್ಮಿಕರು ನಿಟ್ಟುಸಿರುಬಿಟ್ಟಿದ್ದು, ಹಂಚಿನ ಉದ್ಯಮವನ್ನು ಉಳಿಸಿಕೊಳ್ಳಲು ಕೈಗೊಂಡ ಕ್ರಮಕ್ಕೆ ಸ್ವಾಗತ ವ್ಯಕ್ತಪಡಿಸಿದ್ದಾರೆ. ಯುವ ನಾಯಕ ಅಜಿತ್ ಕುಮಾರ್ ಶೆಟ್ಟಿ ಅವರ ಕಾಳಜಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ತಕ್ಷಣದ ಸ್ಪಂದನೆಗೆ ಸಮಾಜದ ವಿವಿಧ ವರ್ಗಗಳಿಂದ ಪ್ರಶಂಸೆ ವ್ಯಕ್ತವಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions