2024ರ ಲೋಕಸಭೆ ಚುನಾವಣೆಯಲ್ಲಿ (Loksabha Election ) ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ (Rahul Gandhi) ಆಟಂ ಬಾಂಬ್ ಸಿಡಿಸಿದ್ದಾರೆ. ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಾಳೆ (ಆಗಸ್ಟ್ 08) ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್ನಲ್ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನಾ ಸಮಾವೇಶಕ್ಕೆ 'ವೋಟ್ ಅಧಿಕಾರ್ ರ್ಯಾಲಿ' ಎಂದು ಹೆಸರಿಸಲಾಗಿದ್ದು, ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಹೀಗಾಗಿ ಟ್ರಾಫಿಕ್ ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ಇನ್ನು ಭದ್ರತೆಗಾಗಿ 6 ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions