ಪವಿತ್ರ ರಮಝಾನ್ ಮಾಸವನ್ನು ಆತ್ಮೀಯವಾಗಿ ಸ್ವಾಗತಿಸುವ ಉದ್ದೇಶದಿಂದ “ರಮಝಾನ್ ಸ್ವಾಗತ” ವಿಶೇಷ ಕಾರ್ಯಕ್ರಮವನ್ನು ಫೆಬ್ರವರಿ 15ರ ಭಾನುವಾರ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 12:30ರವರೆಗೆ ಉಡುಪಿ ಜಾಮಿಯಾ ಮಸೀದಿಯಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟಕರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶ್ವಪ್ರಸಿದ್ಧ ಇಸ್ಲಾಮಿಕ್ ಪಂಡಿತರಾದ ಹಾಗೂ ಜಮಾಅತ್-ಎ-ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷರಾದ ಎಸ್. ಅಮೀನೂಲ್ ಹಸನ್ (B.E., M.Sc.) ಅವರು ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿ ರಮಝಾನ್, ಉಪವಾಸದ ಮಹತ್ವ ಮತ್ತು ಸಾಮಾಜಿಕ ಸಂದೇಶಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions