ಸುರಕ್ಷತಾ ಮಾಸಾಚರಣೆ ಹಾಗೂ ಜಿಲ್ಲಾ ಆಡಳಿತದ ಆದೇಶದಂತೆ, 6 ಚಕ್ರ ಮತ್ತು ಅದಕ್ಕಿಂತ ಹೆಚ್ಚು ಚಕ್ರ ಹೊಂದಿರುವ ಸರಕು ವಾಹನಗಳಲ್ಲಿ ಕಡ್ಡಾಯವಾಗಿ ಸ್ಪೀಡ್ ಗವರ್ನರ್ ಅಳವಡಿಸುವ ಕುರಿತಾಗಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಜಾಗೃತಿ ಕಾರ್ಯಾಚರಣೆ ನಡೆಸಲಾಯಿತು.
ಠಾಣಾ ವ್ಯಾಪ್ತಿಯ ನಿಟ್ಟೆ, ಬೆಲ್ಮನ್ ಹಾಗೂ ಜಾರಿಗೆ ಕಟ್ಟೆ ಪ್ರದೇಶಗಳಲ್ಲಿ ಲಾರಿ ಮತ್ತು ಬಸ್ ಚಾಲಕರಿಗೆ ಸಂಚಾರಿ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದು, ಸ್ಪೀಡ್ ಗವರ್ನರ್ ಅಳವಡಿಸುವ ಅಗತ್ಯತೆ ಕುರಿತು ಕರಪತ್ರಗಳನ್ನು ವಿತರಿಸಿ ವಾಹನ ಚಾಲಕರಲ್ಲಿ ಅರಿವು ಮೂಡಿಸಲಾಯಿತು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions