ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10 ಗಂಟೆಗೆ ಈ ಅಪಘಾತ ಸಂಭವಿಸಿದೆ.
ತೀರ್ಥಹಳ್ಳಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ದಾವಣಗೆರೆ ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿ ಕಡೆ ಹೊರಟಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.
ಕಾರು ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಫಾತಿಮಾ (70 ವರ್ಷ), ರಿಹಾನ್ (15 ವರ್ಷ), ರಾಹಿಲ್ (9 ವರ್ಷ) ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಹಾಗೂ ಚಾಲಕರನ್ನು ಪಟ್ಟಣದ ಜೆ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ
ಕಾರಿನಲ್ಲಿದ್ದವರು ಶೃಂಗೇರಿ ಮೂಲದ ಮೆಣಸೆಯವರಾಗಿದ್ದು, ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಮದುವೆಯಲ್ಲಿ ಭಾಗಿಯಾಗಿ ಶೃಂಗೇರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions