ದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ನೂರು ರೂಪಾಯಿಯ ವಿಶಿಷ್ಟ ನಾಣ್ಯವೊಂದನ್ನು ಬಿಡುಗಡೆ ಮಾಡಿದ್ದಾರೆ.
ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ವಿಶೇಷ ಲಾಂಛನ ಹೊಂದಿರುವ ನಾಣ್ಯ ಇದಾಗಿದೆ. ನಾಣ್ಯದ ಜೊತೆ ಅಂಚೆಚೀಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.
ಆರ್ಎಸ್ಎಸ್ನ 100 ವರ್ಷಗಳ ಸೇವೆಯನ್ನು ಗುರುತಿಸಲು ಬಿಡುಗಡೆಯಾದ ಅಂಚೆ ಚೀಟಿ ಮತ್ತು ನಾಣ್ಯವು ಐತಿಹಾಸಿಕವಾಗಿದೆ. 100 ರೂಪಾಯಿ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವಿದ್ದರೆ, ಇನ್ನೊಂದು ಬದಿಯಲ್ಲಿ ಸಿಂಹ ಮತ್ತು ಸ್ವಯಂಸೇವಕರು ಭಕ್ತಿಯಿಂದ ನಮಸ್ಕರಿಸುವ ಭಾರತ ಮಾತೆಯ ಚಿತ್ರವಿದೆ. ಭಾರತ ಮಾತೆಯ ಚಿತ್ರವು ಭಾರತೀಯ ಕರೆನ್ಸಿಯಲ್ಲಿ, ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಅಂಚೆ ಚೀಟಿಯು 1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರ ದೇಶಭಕ್ತಿಯ ಭಾಗವಹಿಸುವಿಕೆಯನ್ನು ಸ್ಮರಿಸುತ್ತದೆ. ಈ ಅಂಚೆ ಚೀಟಿಯು ಆ ಐತಿಹಾಸಿಕ ಕ್ಷಣವನ್ನು ಗೌರವಿಸುತ್ತದೆ. ರಾಷ್ಟ್ರ ಸೇವೆಗೆ ಸಮರ್ಪಿತ ಸ್ವಯಂಸೇವಕರನ್ನು ಪ್ರತಿಫಲಿಸುತ್ತದೆ ಎಂದು ಅವರು ಹೇಳಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 KannadaExpress. All Rights Reserved.
Design by GreyCrust Solutions