Advertisement

ಉಡುಪಿ | ಕೊಲ್ಲೂರಿನ ಸೌಪರ್ಣಿಕಾ ನಡಿಯಲ್ಲಿ ಮುಳುಗಿ ಮೃತಪಟ್ಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ !

ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯ ಸಂಪ್ರೆ ಎಂಬಲ್ಲಿ ಸೌಪರ್ಣಿಕಾ ನದಿಯಲ್ಲಿ ಯುವಕನೋರ್ವ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಲಭಿಸಿದ್ದು, ತನ್ನ ಬಗ್ಗೆ ಮಾಡುತ್ತಿರುವ ಅಪಪ್ರಚಾರದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಇಬ್ಬರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕೊಲ್ಲೂರಿನ ನಟೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ಆ.7ರಂದು ಸಂಪ್ರೆಯ ಸೌಪರ್ಣಿಕಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವೇಳೆ ನಟೇಶ್ ಸೌಪರ್ಣಿಕಾ ನದಿಯ ದಡದಲ್ಲಿ ನಿಲ್ಲಿಸಿದ್ದ ಕಾರನ್ನು ಮನೆಗೆ ಕೊಂಡೊಯ್ಯಲಾಗಿತ್ತು.. ಆ.8 ರಂದು ಬೆಳಗ್ಗೆ ಮನೆಮಂದಿ ನಟೇಶ್ ರ ಕಾರಿನ ಒಳಗೆ ಪರಿಶೀಲಿಸಿದಾಗ ನಟೇಶ್ ಬಳಸುತ್ತಿದ್ದ ಮೊಬೈಲ್ ಮತ್ತು ಅದರ ಜೊತೆಗೆ ಒಂದು ಚೀಟಿ ಲಭಿಸಿದೆ. ಆ ಚೀಟಿಯಲ್ಲಿ ತನ್ನ ಸಾವಿನ ರಹಸ್ಯ ಮೊಬೈಲ್ ಗ್ಯಾಲರಿಯಲ್ಲಿದೆ ಎಂದು ಬರೆದು ಮೊಬೈಲ್ ಪಾಸ್ ವರ್ಡ್ ಅನ್ನು ಕೂಡಾ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮೊಬೈಲ್ ಅನ್ನು ಪರಿಶೀಲಿಸಿದಾಗ ಸಂತು ಮತ್ತು ನಾಗೇಶ ಯಾನೆ ದಳಿ ನಾಗ ಎಂಬವರು ತನ್ನ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದು, ಇದರಿಂದ ಮನನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ನಟೇಶ್ ಮಾಡಿರುವ ವೀಡಿಯೊ ಪತ್ತೆಯಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂತು ಯಾನೆ ಸಂತೋಷ್ ಮತ್ತು ದಳಿ-ನಾಗ ವಿರುದ್ಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions