Advertisement

ಉಡುಪಿ | ಸಮಾನ ಮನಸ್ಕ ವಿದ್ಯಾರ್ಥಿಗಳಿಂದ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿ ಕೌನ್ಸಿಲ್ ರಚನೆ

ಉಡುಪಿ: ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಮೂರು ವರ್ಷದ ಪದವಿ ವಿಭಾಗದ ವಿದ್ಯಾರ್ಥಿ ಕೌನ್ಸಿಲ್‌ಗೆ ನಡೆದ ಚುನಾವಣೆಯಲ್ಲಿ ಒಟ್ಟು 14 ಸ್ಥಾನಗಳಲ್ಲಿ ಸಮಾನ ಮನಸ್ಕ ವಿದ್ಯಾರ್ಥಿಗಳು ಜಯಗಳಿಸಿದ್ದು, ಶಮಂತ್ ಹೆಬ್ರಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಲಕ್ಷ್ಮಿ, ಎನ್‌ಎಸ್‌ಎಸ್‌ ಕಾರ್ಯದರ್ಶಿಯಾಗಿ ಸಮೀರ್ ತೀರ್ಥಹಳ್ಳಿ ಹಾಗೂ ಅಂಕಿತಾ, ಕ್ರೀಡಾ ಕಾರ್ಯದರ್ಶಿಯಾಗಿ ನಿಶ್ಚಿತ, ನೇಚರ್ಸ್ ಕ್ಲಬ್ ಕಾರ್ಯದರ್ಶಿಯಾಗಿ ಧ್ವಣಿ ಶೆಟ್ಟಿ, ರೆಡ್‌ಕ್ರಾಸ್ ಕಾರ್ಯದರ್ಶಿಯಾಗಿ ಶ್ರನ್ಯಾ, ಡಿಬೇಟ್ ಮತ್ತು ಕ್ವಿಝ್ ಕಾರ್ಯದರ್ಶಿಯಾಗಿ ಮೇಘನಾ, ಚುನಾವಣಾ ಸಾಕ್ಷರತಾ ಕ್ಲಬ್ ಕಾರ್ಯದರ್ಶಿಯಾಗಿ ಅಕ್ಷತಾ, ಪ್ಲೇಸ್‌ಮೆಂಟ್ ಸೆಲ್‌ಗೆ ಡಿಯೋನ್, ಮಾನವ ಹಕ್ಕುಗಳ ಕ್ಲಬ್ ಕಾರ್ಯದರ್ಶಿಯಾಗಿ ಕಾವ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೇದಾ, ಮೂಟ್ ಕೋರ್ಟ್ ಸೊಸೈಟಿ ಕಾರ್ಯದರ್ಶಿಯಾಗಿ ಸಾಯಿರಮ್ಯ, ಲೀಗಲ್ ಸರ್ವಿಸ್ ಕ್ಲಿನಿಕ್ ಕಾರ್ಯದರ್ಶಿಯಾಗಿ ದಿಶಾ ಮತ್ತು ಪಬ್ಲಿಕೇಶನ್ ಕಮಿಟಿ ಕಾರ್ಯದರ್ಶಿಯಾಗಿ ವೈಷ್ಣವಿ ಆಯ್ಕೆಯಾಗಿದ್ದಾರೆ.

ಹೊಸ ಕಾರ್ಯಕಾರಿ ಸಮಿತಿಯು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವತ್ತ ಹಾಗೂ ವಿದ್ಯಾರ್ಥಿ ಚಟುವಟಿಕೆಗಳ ಉತ್ತೇಜನಕ್ಕೆ ಬದ್ಧವಾಗಿದ್ದು, ಉತ್ತಮ ಸೌಕರ್ಯಗಳು, ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶಗಳು ಮತ್ತು ಸೃಜನಾತ್ಮಕ ವೇದಿಕೆಗಳನ್ನು ಒದಗಿಸಲು ಆಶ್ವಾಸನೆ ನೀಡಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Udupi

9985974521

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions